ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
TSK
TSK · ಯೋವೇಲ 2:23
Treasury of Scripture Knowledge references in ಕನ್ನಡ IRV.
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.
ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
¶ ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.