ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
TSK
TSK · ಯೋವೇಲ 3:12
Treasury of Scripture Knowledge references in ಕನ್ನಡ IRV.
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
¶ “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.
ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.