TSK

TSK · ಯೋವೇಲ 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.

ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.

ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.

ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”

‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

¶ “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.

‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.