ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
TSK
TSK · ಯೋಹಾನನು 1:16
Treasury of Scripture Knowledge references in ಕನ್ನಡ IRV.
‹ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.›
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
¶ ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.