ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೋಹಾನನು 10:16
Treasury of Scripture Knowledge references in ಕನ್ನಡ IRV.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
¶ ‹“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?›
‹ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.›
‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
¶ “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›