TSK

TSK · ಯೋಹಾನನು 10:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.

ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›

ಆ ಮೇಲೆ ಯೇಸು, ‹“ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ”› ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

‹ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ›‹ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.›

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›

‹ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,›‹ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.›

¶ ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,

ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

¶ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,

ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.

ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.

ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,

¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,