ಯಾಜಕಕಾಂಡ 24:14
TSK
“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
TSK
Treasury of Scripture Knowledge references in ಕನ್ನಡ IRV.
“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
¶ ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.