TSK

TSK · ಯೋಹಾನನು 11:52

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.

ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.

ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.

¶ “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’

ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

‹ಆದರೆ›‹ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು”› ಎಂದು ಹೇಳಿದನು.

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.

ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.

ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.