¶ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
TSK
TSK · ಯೋಹಾನನು 12:15
Treasury of Scripture Knowledge references in ಕನ್ನಡ IRV.
ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;
ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.
“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.