ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
TSK
TSK · ಯೋಹಾನನು 12:27
Treasury of Scripture Knowledge references in ಕನ್ನಡ IRV.
ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
ತಿರುಗಿ ಎರಡನೇ ಸಾರಿ ಹೋಗಿ, ‹“ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
ಆಗ ಯೇಸು ಅವರಿಗೆ, ‹“ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.›
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, ‹“ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ”› ಎಂದು ಉತ್ತರಕೊಟ್ಟನು.
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,