ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
TSK
TSK · ಯೋಹಾನನು 12:43
Treasury of Scripture Knowledge references in ಕನ್ನಡ IRV.
‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›
‹ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.›
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
‹ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.›
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.