ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
TSK
TSK · ಯೋಹಾನನು 12:6
Treasury of Scripture Knowledge references in ಕನ್ನಡ IRV.
ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
ಆತನು ಅವರಿಗೆ, ‹“‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ›‹ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ”› ಎಂದು ಹೇಳಿದನು.
‹ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.›
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,