TSK

TSK · ಯೋಹಾನನು 13:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.

“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.

ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.

¶ ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?