ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
TSK
TSK · ಯೋಹಾನನು 14:21
Treasury of Scripture Knowledge references in ಕನ್ನಡ IRV.
ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.
¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›
¶ ‹“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.›
‹ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ›‹ನನ್ನನ್ನೇ ಮಹಿಮೆಪಡಿಸುವನು.›
‹ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.›
ಆತನು; ‹‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’› ಅಂದನು.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›