TSK

TSK · ಯೋಹಾನನು 14:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

‹ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.›

‹ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.›

‹ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.›

‹ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು”› ಎಂದು ಹೇಳಿದನು.

¶ ಆಗ ಯೇಸು ಪುನಃ ಅವರಿಗೆ, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,›

‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›

‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.

ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.