ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
TSK
TSK · ಯೋಹಾನನು 15:25
Treasury of Scripture Knowledge references in ಕನ್ನಡ IRV.
ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.