ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
TSK
TSK · ಯೋಹಾನನು 15:8
Treasury of Scripture Knowledge references in ಕನ್ನಡ IRV.
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, ‹“ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.›
‹ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.›
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.