TSK

TSK · ಯೋಹಾನನು 16:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

‹ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.›

ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

¶ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,