ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
TSK
TSK · ಯೋಹಾನನು 16:14
Treasury of Scripture Knowledge references in ಕನ್ನಡ IRV.
‹ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ›
ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
¶ ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.