ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.
TSK
TSK · ಯೋಹಾನನು 18:35
Treasury of Scripture Knowledge references in ಕನ್ನಡ IRV.
ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
¶ ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?