TSK

TSK · ಯೋಹಾನನು 19:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.

ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.

‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.

ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.

‹‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.›

‹ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ”› ಎಂದು ಹೇಳಿದನು.

ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.

ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

¶ ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.