ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
TSK
TSK · ಯೋಹಾನನು 19:4
Treasury of Scripture Knowledge references in ಕನ್ನಡ IRV.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.