TSK

TSK · ಯೋಹಾನನು 21:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

‹ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.›

ಯೇಸು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ›‹ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.›

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.

ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.