TSK

TSK · ಯೋಹಾನನು 3:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›

‹ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು”› ಎಂದು ಹೇಳಿದನು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›

‹ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›

ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.

¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

¶ ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.

ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.