ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.
TSK
TSK · ಯೋಹಾನನು 4:23
Treasury of Scripture Knowledge references in ಕನ್ನಡ IRV.
ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.
‹ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,›
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.›
‹ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.›‹ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.›
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.