¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
TSK
TSK · ಯೋಹಾನನು 4:9
Treasury of Scripture Knowledge references in ಕನ್ನಡ IRV.
¶ ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.
ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.