TSK

TSK · ಯೋಹಾನನು 5:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.

ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.

ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.

ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

¶ ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅದಕ್ಕೆ ಆತನು ‹“ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?”› ಎಂದನು.

¶ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

‹ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”›

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

‹ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.›

‹ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.›

ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.

¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.