TSK

TSK · ಯೋಹಾನನು 6:63

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

¶ ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.

ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.

ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

¶ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.