‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›
TSK
TSK · ಯೋಹಾನನು 7:12
Treasury of Scripture Knowledge references in ಕನ್ನಡ IRV.
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
‹ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
ಯೇಸು ಅವನಿಗೆ, ‹“ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.›
¶ ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
¶ ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
¶ ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.