ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
TSK
TSK · ಯೋಹಾನನು 7:27
Treasury of Scripture Knowledge references in ಕನ್ನಡ IRV.
ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.