TSK

TSK · ಯೋಹಾನನು 7:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.

¶ “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.

ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.

ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?

ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.

ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.

ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›

ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.

‹ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.›

‹ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.›

ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, ‹“ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.›

ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ”› ಅಂದನು.

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,