TSK

TSK · ಯೋಹಾನನು 9:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.

ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

¶ ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,

ಅದೇನೆಂದರೆ, ‹“ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.›

‹ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.›

‹ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ”› ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.

ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.

ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,

ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

¶ ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.