ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
TSK
TSK · ಯೋಹಾನನು 9:5
Treasury of Scripture Knowledge references in ಕನ್ನಡ IRV.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›
ಆಗ ಯೇಸು ಅವರಿಗೆ, ‹“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.›
ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.