ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.
TSK
TSK · ಯೋನ 1:5
Treasury of Scripture Knowledge references in ಕನ್ನಡ IRV.
ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.
ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, ‹“ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?›
ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, ‹“ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.›
ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.