TSK

TSK · ಯೋನ 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.

ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

¶ “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,

ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,

¶ ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?

ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”