ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
TSK
TSK · ಯೋನ 2:9
Treasury of Scripture Knowledge references in ಕನ್ನಡ IRV.
ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.