TSK

TSK · ಯೋನ 2:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.

ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.

ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.

ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.