¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · ಯೆಹೋಶುವ 2:9
Treasury of Scripture Knowledge references in ಕನ್ನಡ IRV.
ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.
¶ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.
ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.
ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
¶ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›