TSK

TSK · ಯೆಹೋಶುವ 23:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.

ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.

ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.

ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.

ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.

ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.

ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.