TSK

TSK · ಯೂದನು 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.

ಅದಕ್ಕೆ ಆತನು ‹“ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.›

‹ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.›

‹ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.›

‹ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,›

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.

ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.