¶ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
TSK
TSK · ಯೂದನು 1:16
Treasury of Scripture Knowledge references in ಕನ್ನಡ IRV.
ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.
ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ ‹“ಈ ಮಾತಿನಿಂದ ನಿಮಗೆ ಬೇಸರವಾಯಿತೋ?›
¶ ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.
ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.