ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
TSK
TSK · ಯೂದನು 1:21
Treasury of Scripture Knowledge references in ಕನ್ನಡ IRV.
¶ ‹“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.›
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
¶ ‹“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.›
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
¶ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,