ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
TSK
TSK · ಯೂದನು 1:4
Treasury of Scripture Knowledge references in ಕನ್ನಡ IRV.
‹ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.›
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
¶ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
¶ ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.
ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”