ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
TSK
TSK · ನ್ಯಾಯಸ್ಥಾಪಕರು 1:7
Treasury of Scripture Knowledge references in ಕನ್ನಡ IRV.
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
¶ ‹“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.›
ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.