TSK

TSK · ನ್ಯಾಯಸ್ಥಾಪಕರು 10:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.

ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.

ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.

ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.