ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
TSK
TSK · ನ್ಯಾಯಸ್ಥಾಪಕರು 14:6
Treasury of Scripture Knowledge references in ಕನ್ನಡ IRV.
ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.
ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›