TSK

TSK · ನ್ಯಾಯಸ್ಥಾಪಕರು 16:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.

ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.

ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.