¶ ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
TSK
TSK · ನ್ಯಾಯಸ್ಥಾಪಕರು 2:1
Treasury of Scripture Knowledge references in ಕನ್ನಡ IRV.
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.
ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.
ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;
¶ ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;
¶ “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.