ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
TSK
TSK · ನ್ಯಾಯಸ್ಥಾಪಕರು 2:14
Treasury of Scripture Knowledge references in ಕನ್ನಡ IRV.
¶ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
¶ ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
¶ ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.
ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
¶ ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”