ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
TSK
TSK · ನ್ಯಾಯಸ್ಥಾಪಕರು 2:18
Treasury of Scripture Knowledge references in ಕನ್ನಡ IRV.
ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.
ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
¶ ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›